July 23, 2026
Uncategorized

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಮಾಡಿ,ಅರ್ಪಣಾ ಭಾವದಿಂದ ಸಮಾಜ ಸೇವೆ ಮಾಡುತ್ತಿರುವ ಡಾ. ರವಿ ಪೂಜಾರಿ ಕಕ್ಕೆಪದವು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕಾಯಕ ಯೋಗಿ- 2025 ಪ್ರಶಸ್ತಿ ನೀಡಿ ಗೌರವಿಸಿದೆ‌.

ಮೇ 1 ರಂದು ಬಾಗಲಕೋಟೆಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರವಿ ಪೂಜಾರಿ ಕಕ್ಯಪದವು ಪ್ರಶಸ್ತಿ ಸ್ವೀಕರಿಸಿದರು.

ಡಾ. ರವಿ ಪೂಜಾರಿ ಕಕ್ಯಪದವು ಅವರು ಸುಬ್ರಹ್ಮಣ್ಯದಲ್ಲಿ ಸಮಾಜ ಸೇವಾ ಸಂಘಟನೆಯನ್ನು ಕಟ್ಟಿಕೊಂಡು ಬಡವರಿಗೆ,ನಿರ್ಗತಿಕರಿಗೆ,ಸಮಸ್ಯೆಗೊಳಗಾದವರನ್ನು ಸಂತೈಸುವ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡ ಹಲವಾರು ಮಂದಿಗೆ ಸ್ವಂತ ಜಾಗ ನೀಡಿ, ಅವರಿಗೆ ಮನೆ ನಿರ್ಮಿಸಿ ಕೊಟ್ಟು ಒರ್ವ ನಿಜವಾದ ಸಮಾಜಸೇವಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

ತಾನು ವಿದ್ಯೆ ಕಲಿಯದಿದ್ದರು,ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆವಿದ್ದ ಹಲವಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ರವಿ ಪೂಜಾರಿಯವರು ಮಾಡುತ್ತಿರುವುದು ಶ್ಲಾಘನೀಯವಾದುದು.

ಇವರ ಸಮಾಜ ಸೇವೆಗೆ ಜೆಸಿಐ,ರೋಟರಿ,ಲಯನ್ಸ್ ಕ್ಲಬ್, ಸಂಘ ಸಂಸ್ಥೆಗಳು ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ ಸಮ್ಮಾನ ನೀಡಿ ಗೌರವಿಸಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya
error: Content is protected !!