25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು.

ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು. ಶ್ರೀ ದೈವ ಕೊಡಮಣಿತ್ತಾಯ, ರಕ್ತೇಶ್ವರಿ, ಪಂಜುರ್ಲಿ ಹಾಗೂ ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಪಡ್ಯಾರಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಡಾ.ಮೋಹನ್ ಆಳ್ವ, ಕುಲದೀಪ್ ಚೌಟ ಮೂಡಬಿದ್ರೆ ಅರಮನೆ, ಪ್ರಮುಖರಾದ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಮುಖರಾದ ಜಯಂತ್ ಕೋಟ್ಯಾನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಬಂಧು ಮಿತ್ರರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಪಾರ್ಶ್ವನಾಥ ಜೈನ್,ಜಿನೇಂದ್ರ ಜೈನ್,ಪ್ರಪುಲ್ಲ ಯುವರಾಜ್ ಬೆಳ್ತಂಗಡಿ, ಶೀತಲ್ ಜೈನ್ ಶಿರ್ಲಾಲು ಹಾಗೂ ಹರಂಬೆಟ್ಟು ಗುತ್ತು ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya
error: Content is protected !!