July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು.

ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು. ಶ್ರೀ ದೈವ ಕೊಡಮಣಿತ್ತಾಯ, ರಕ್ತೇಶ್ವರಿ, ಪಂಜುರ್ಲಿ ಹಾಗೂ ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಪಡ್ಯಾರಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಡಾ.ಮೋಹನ್ ಆಳ್ವ, ಕುಲದೀಪ್ ಚೌಟ ಮೂಡಬಿದ್ರೆ ಅರಮನೆ, ಪ್ರಮುಖರಾದ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಮುಖರಾದ ಜಯಂತ್ ಕೋಟ್ಯಾನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಬಂಧು ಮಿತ್ರರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಪಾರ್ಶ್ವನಾಥ ಜೈನ್,ಜಿನೇಂದ್ರ ಜೈನ್,ಪ್ರಪುಲ್ಲ ಯುವರಾಜ್ ಬೆಳ್ತಂಗಡಿ, ಶೀತಲ್ ಜೈನ್ ಶಿರ್ಲಾಲು ಹಾಗೂ ಹರಂಬೆಟ್ಟು ಗುತ್ತು ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
error: Content is protected !!