May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮೇಲಂತಬೆಟ್ಟು: ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಮೇಲಂತಬೆಟ್ಟು ಇವುಗಳ ಸಂಯೋಗದೊಂದಿಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ವು ಮೇ05 ರಂದು ಪ್ರಾರಂಭಗೊಂಡು ಮೇ 09 ರಂದು ಮುಕ್ತಾಯಗೊಂಡಿತು.

5 ದಿನದ ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿ ಯಾಗಿ ಶ್ರೀಮತಿ ಹೇಮಾವತಿ ವಲಯ ತರಬೇತುದಾರರು ಜೆಸಿಐ ಇಂಡಿಯಾ ಇವರು ಆಗಮಿಸಿ ಮಕ್ಕಳ ಬೌದ್ಧಿಕ ಹಾಗೂ ವ್ಯಕ್ತಿತ್ವ ವಿಕಸನ ಹಾಗೂ ಇತರ ಚಟುವಟಿಕೆಯನ್ನು ನಡೆಸಿಕೊಟ್ಟರು.ಮೇ 09 ರಂದು ಶಿಬಿರದ ಸಮಾರೋಪ ಸಮಾರಂಭವು ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು. ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸವಿತಾ ಇವರು ಮಕ್ಕಳ ಭವಿಷ್ಯ ಕ್ಕೆ ಒಳ್ಳೆಯ ಹಿತನುಡಿ ಹೇಳಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಶಿಬಿರದ ಪ್ರಯೋಜನ ಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಹಾಗೂ ಸದಸ್ಯರಾದ ಚಂದ್ರರಾಜ್ ಎಂ, ಶ್ರೀಮತಿ ಸುಮಲತಾ, ಶ್ರೀಮತಿ ದೀಪಿಕಾ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕಾರ್ಯಕ್ರಮಕ್ಕೆ ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಚಂದ್ರಾವತಿ ಸಿಬ್ಬಂದಿಗಳು ಹಾಗೂ ವಿ ಆರ್ ಡಬ್ಲ್ಯೂ ಗಣೇಶ್ ಸಹಕರಿಸಿದರು. ಶ್ರೀಮತಿ ಚಂದ್ರಾವತಿ ಗ್ರಂಥಪಾಲಕಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya
error: Content is protected !!