25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!