31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!