31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya
error: Content is protected !!