27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya
error: Content is protected !!