22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!