27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!