25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya
error: Content is protected !!