25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
error: Content is protected !!