July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
error: Content is protected !!