31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಹೆಚ್‌ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳಿಗಾಗಿ , ಮಾಹಿತಿ ಸತ್ರ ಹಾಗೂ ಉಚಿತ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತಾ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ| ಕುಶಾಲಪ್ಪ ಎಸ್. ಅವರು ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.


ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ಟಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟ್ಟಿಲ್ ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ| ಧನೇಶ್ವರಿ ಅವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜ್ಞಾನನಿಲಯ ಬೆಳ್ತಂಗಡಿಯ ನಿರ್ದೇಶಕರಾದ ವಂ. ಫಾ. ಜೋಸೆಫ್ ಮಟ್ಟಂ ಅವರು ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು.

ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರಾದ ಶ್ರೀಮತಿ ಶಾರದಾ ಮತ್ತು ಶ್ರೀಮತಿ ಪುಷ್ಪಾ ಪ್ರಾರ್ಥನೆ ನೆರವೇರಿಸಿದರು. ಡಿ. ಕೆ. ಆರ್. ಡಿ ಎಸ್ ಸಂಸ್ಥೆಯ ಸಿಬ್ಬಂದಿ ಶ್ರೀಮತಿ ಸಿಸಿಲಿಯಾ ತಾವ್ರೊ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು. ಮಾರ್ಕ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಬ್ಬಂದಿಗಳಾದ ಕುಮಾರಿ ಶ್ರೇಯಾ, ಸುನಿಲ್ ಹಾಗೂ ಜಾನ್ಸನ್ ಸಹಕರಿಸಿದರು.

Related posts

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya
error: Content is protected !!