23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಮಾಡಿ,ಅರ್ಪಣಾ ಭಾವದಿಂದ ಸಮಾಜ ಸೇವೆ ಮಾಡುತ್ತಿರುವ ಡಾ. ರವಿ ಪೂಜಾರಿ ಕಕ್ಕೆಪದವು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕಾಯಕ ಯೋಗಿ- 2025 ಪ್ರಶಸ್ತಿ ನೀಡಿ ಗೌರವಿಸಿದೆ‌.

ಮೇ 1 ರಂದು ಬಾಗಲಕೋಟೆಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರವಿ ಪೂಜಾರಿ ಕಕ್ಯಪದವು ಪ್ರಶಸ್ತಿ ಸ್ವೀಕರಿಸಿದರು.

ಡಾ. ರವಿ ಪೂಜಾರಿ ಕಕ್ಯಪದವು ಅವರು ಸುಬ್ರಹ್ಮಣ್ಯದಲ್ಲಿ ಸಮಾಜ ಸೇವಾ ಸಂಘಟನೆಯನ್ನು ಕಟ್ಟಿಕೊಂಡು ಬಡವರಿಗೆ,ನಿರ್ಗತಿಕರಿಗೆ,ಸಮಸ್ಯೆಗೊಳಗಾದವರನ್ನು ಸಂತೈಸುವ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡ ಹಲವಾರು ಮಂದಿಗೆ ಸ್ವಂತ ಜಾಗ ನೀಡಿ, ಅವರಿಗೆ ಮನೆ ನಿರ್ಮಿಸಿ ಕೊಟ್ಟು ಒರ್ವ ನಿಜವಾದ ಸಮಾಜಸೇವಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

ತಾನು ವಿದ್ಯೆ ಕಲಿಯದಿದ್ದರು,ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆವಿದ್ದ ಹಲವಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ರವಿ ಪೂಜಾರಿಯವರು ಮಾಡುತ್ತಿರುವುದು ಶ್ಲಾಘನೀಯವಾದುದು.

ಇವರ ಸಮಾಜ ಸೇವೆಗೆ ಜೆಸಿಐ,ರೋಟರಿ,ಲಯನ್ಸ್ ಕ್ಲಬ್, ಸಂಘ ಸಂಸ್ಥೆಗಳು ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ ಸಮ್ಮಾನ ನೀಡಿ ಗೌರವಿಸಿದೆ.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya
error: Content is protected !!