23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಮಾಡಿ,ಅರ್ಪಣಾ ಭಾವದಿಂದ ಸಮಾಜ ಸೇವೆ ಮಾಡುತ್ತಿರುವ ಡಾ. ರವಿ ಪೂಜಾರಿ ಕಕ್ಕೆಪದವು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕಾಯಕ ಯೋಗಿ- 2025 ಪ್ರಶಸ್ತಿ ನೀಡಿ ಗೌರವಿಸಿದೆ‌.

ಮೇ 1 ರಂದು ಬಾಗಲಕೋಟೆಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರವಿ ಪೂಜಾರಿ ಕಕ್ಯಪದವು ಪ್ರಶಸ್ತಿ ಸ್ವೀಕರಿಸಿದರು.

ಡಾ. ರವಿ ಪೂಜಾರಿ ಕಕ್ಯಪದವು ಅವರು ಸುಬ್ರಹ್ಮಣ್ಯದಲ್ಲಿ ಸಮಾಜ ಸೇವಾ ಸಂಘಟನೆಯನ್ನು ಕಟ್ಟಿಕೊಂಡು ಬಡವರಿಗೆ,ನಿರ್ಗತಿಕರಿಗೆ,ಸಮಸ್ಯೆಗೊಳಗಾದವರನ್ನು ಸಂತೈಸುವ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡ ಹಲವಾರು ಮಂದಿಗೆ ಸ್ವಂತ ಜಾಗ ನೀಡಿ, ಅವರಿಗೆ ಮನೆ ನಿರ್ಮಿಸಿ ಕೊಟ್ಟು ಒರ್ವ ನಿಜವಾದ ಸಮಾಜಸೇವಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

ತಾನು ವಿದ್ಯೆ ಕಲಿಯದಿದ್ದರು,ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆವಿದ್ದ ಹಲವಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ರವಿ ಪೂಜಾರಿಯವರು ಮಾಡುತ್ತಿರುವುದು ಶ್ಲಾಘನೀಯವಾದುದು.

ಇವರ ಸಮಾಜ ಸೇವೆಗೆ ಜೆಸಿಐ,ರೋಟರಿ,ಲಯನ್ಸ್ ಕ್ಲಬ್, ಸಂಘ ಸಂಸ್ಥೆಗಳು ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ ಸಮ್ಮಾನ ನೀಡಿ ಗೌರವಿಸಿದೆ.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!