25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಮಾಡಿ,ಅರ್ಪಣಾ ಭಾವದಿಂದ ಸಮಾಜ ಸೇವೆ ಮಾಡುತ್ತಿರುವ ಡಾ. ರವಿ ಪೂಜಾರಿ ಕಕ್ಕೆಪದವು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಸಮಾಜ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕಾಯಕ ಯೋಗಿ- 2025 ಪ್ರಶಸ್ತಿ ನೀಡಿ ಗೌರವಿಸಿದೆ‌.

ಮೇ 1 ರಂದು ಬಾಗಲಕೋಟೆಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ರವಿ ಪೂಜಾರಿ ಕಕ್ಯಪದವು ಪ್ರಶಸ್ತಿ ಸ್ವೀಕರಿಸಿದರು.

ಡಾ. ರವಿ ಪೂಜಾರಿ ಕಕ್ಯಪದವು ಅವರು ಸುಬ್ರಹ್ಮಣ್ಯದಲ್ಲಿ ಸಮಾಜ ಸೇವಾ ಸಂಘಟನೆಯನ್ನು ಕಟ್ಟಿಕೊಂಡು ಬಡವರಿಗೆ,ನಿರ್ಗತಿಕರಿಗೆ,ಸಮಸ್ಯೆಗೊಳಗಾದವರನ್ನು ಸಂತೈಸುವ ಕೆಲಸ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡ ಹಲವಾರು ಮಂದಿಗೆ ಸ್ವಂತ ಜಾಗ ನೀಡಿ, ಅವರಿಗೆ ಮನೆ ನಿರ್ಮಿಸಿ ಕೊಟ್ಟು ಒರ್ವ ನಿಜವಾದ ಸಮಾಜಸೇವಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.

ತಾನು ವಿದ್ಯೆ ಕಲಿಯದಿದ್ದರು,ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆವಿದ್ದ ಹಲವಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ರವಿ ಪೂಜಾರಿಯವರು ಮಾಡುತ್ತಿರುವುದು ಶ್ಲಾಘನೀಯವಾದುದು.

ಇವರ ಸಮಾಜ ಸೇವೆಗೆ ಜೆಸಿಐ,ರೋಟರಿ,ಲಯನ್ಸ್ ಕ್ಲಬ್, ಸಂಘ ಸಂಸ್ಥೆಗಳು ಹಲವಾರು ಸಂಘ ಸಂಸ್ಥೆಗಳು ಪ್ರಶಸ್ತಿ ಸಮ್ಮಾನ ನೀಡಿ ಗೌರವಿಸಿದೆ.

Related posts

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!