31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು.

ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು. ಶ್ರೀ ದೈವ ಕೊಡಮಣಿತ್ತಾಯ, ರಕ್ತೇಶ್ವರಿ, ಪಂಜುರ್ಲಿ ಹಾಗೂ ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಪಡ್ಯಾರಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಡಾ.ಮೋಹನ್ ಆಳ್ವ, ಕುಲದೀಪ್ ಚೌಟ ಮೂಡಬಿದ್ರೆ ಅರಮನೆ, ಪ್ರಮುಖರಾದ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಮುಖರಾದ ಜಯಂತ್ ಕೋಟ್ಯಾನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಬಂಧು ಮಿತ್ರರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಪಾರ್ಶ್ವನಾಥ ಜೈನ್,ಜಿನೇಂದ್ರ ಜೈನ್,ಪ್ರಪುಲ್ಲ ಯುವರಾಜ್ ಬೆಳ್ತಂಗಡಿ, ಶೀತಲ್ ಜೈನ್ ಶಿರ್ಲಾಲು ಹಾಗೂ ಹರಂಬೆಟ್ಟು ಗುತ್ತು ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!