30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ


ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ಯ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತ್ಯಾಗ ಬಲಿದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಸ್ಪರ್ಧೆಗಳನ್ನು ನಡೆಸಲು ನಿರ್ದೇಶಿಸಿದ್ದು, ಆ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ, ನೆಹರು ಚಿಂತನ ಕೇಂದ್ರ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಇವರು ಮೇ8 ರಂದು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ಆಯೋಜಿಸಿದ್ದ “

ಭಾರತದ ಸ್ವಾತಂತ್ಯ್ರ ಹೋರಾಟ: ಗಾಂಧೀಜಿಯವರ ಕೊಡುಗೆಗಳು ಮತ್ತು ಜೀವನ ಮೌಲ್ಯ ” ಎಂಬ ವಿಷಯದ ಕುರಿತು ನಡೆಸಿದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಮಲ್ಲಿಕಾರ್ಜುನ ಎಸ್ ಪಾಟೀಲ್, ದರ್ಶನ್ ಪಿ, ನಾಗವೇಣಿ ಜಿ ಎಸ್ ಇವರು ಪ್ರಥಮ ಬಹುಮಾನ ರೂ. 10000 ನಗದು, ಫಲಕ ಮತ್ತು ಪ್ರಮಾಣಪತ್ರವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಕಾರ್ಯದರ್ಶಿಯವರು, ಆಡಳಿತಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya
error: Content is protected !!