31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
error: Content is protected !!