22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya
error: Content is protected !!