25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya
error: Content is protected !!