23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!