25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!