September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!