July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8 ರಂದು ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು.

ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು.

ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡು ಜನತೆಗೆ ಕೈಬೀಸಿದರು. ಈ ವೇಳೆ ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು’ ಎಂದು ಕರೆ ನೀಡಿದರು. ‘ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ’ ಎಂದು ಹೇಳಿದರು.

Related posts

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya
error: Content is protected !!