25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8 ರಂದು ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು.

ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು.

ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡು ಜನತೆಗೆ ಕೈಬೀಸಿದರು. ಈ ವೇಳೆ ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು’ ಎಂದು ಕರೆ ನೀಡಿದರು. ‘ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ’ ಎಂದು ಹೇಳಿದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya
error: Content is protected !!