22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಹೆಚ್‌ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ಮಕ್ಕಳಿಗಾಗಿ , ಮಾಹಿತಿ ಸತ್ರ ಹಾಗೂ ಉಚಿತ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತಾ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ| ಕುಶಾಲಪ್ಪ ಎಸ್. ಅವರು ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.


ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ಟಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟ್ಟಿಲ್ ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ| ಧನೇಶ್ವರಿ ಅವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜ್ಞಾನನಿಲಯ ಬೆಳ್ತಂಗಡಿಯ ನಿರ್ದೇಶಕರಾದ ವಂ. ಫಾ. ಜೋಸೆಫ್ ಮಟ್ಟಂ ಅವರು ಮಕ್ಕಳಿಗೆ ಉಚಿತ ಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು.

ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರಾದ ಶ್ರೀಮತಿ ಶಾರದಾ ಮತ್ತು ಶ್ರೀಮತಿ ಪುಷ್ಪಾ ಪ್ರಾರ್ಥನೆ ನೆರವೇರಿಸಿದರು. ಡಿ. ಕೆ. ಆರ್. ಡಿ ಎಸ್ ಸಂಸ್ಥೆಯ ಸಿಬ್ಬಂದಿ ಶ್ರೀಮತಿ ಸಿಸಿಲಿಯಾ ತಾವ್ರೊ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು. ಮಾರ್ಕ್ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಬ್ಬಂದಿಗಳಾದ ಕುಮಾರಿ ಶ್ರೇಯಾ, ಸುನಿಲ್ ಹಾಗೂ ಜಾನ್ಸನ್ ಸಹಕರಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya
error: Content is protected !!