22.7 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮೇಲಂತಬೆಟ್ಟು: ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಮೇಲಂತಬೆಟ್ಟು ಇವುಗಳ ಸಂಯೋಗದೊಂದಿಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ವು ಮೇ05 ರಂದು ಪ್ರಾರಂಭಗೊಂಡು ಮೇ 09 ರಂದು ಮುಕ್ತಾಯಗೊಂಡಿತು.

5 ದಿನದ ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿ ಯಾಗಿ ಶ್ರೀಮತಿ ಹೇಮಾವತಿ ವಲಯ ತರಬೇತುದಾರರು ಜೆಸಿಐ ಇಂಡಿಯಾ ಇವರು ಆಗಮಿಸಿ ಮಕ್ಕಳ ಬೌದ್ಧಿಕ ಹಾಗೂ ವ್ಯಕ್ತಿತ್ವ ವಿಕಸನ ಹಾಗೂ ಇತರ ಚಟುವಟಿಕೆಯನ್ನು ನಡೆಸಿಕೊಟ್ಟರು.ಮೇ 09 ರಂದು ಶಿಬಿರದ ಸಮಾರೋಪ ಸಮಾರಂಭವು ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು. ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸವಿತಾ ಇವರು ಮಕ್ಕಳ ಭವಿಷ್ಯ ಕ್ಕೆ ಒಳ್ಳೆಯ ಹಿತನುಡಿ ಹೇಳಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಶಿಬಿರದ ಪ್ರಯೋಜನ ಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಹಾಗೂ ಸದಸ್ಯರಾದ ಚಂದ್ರರಾಜ್ ಎಂ, ಶ್ರೀಮತಿ ಸುಮಲತಾ, ಶ್ರೀಮತಿ ದೀಪಿಕಾ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕಾರ್ಯಕ್ರಮಕ್ಕೆ ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಚಂದ್ರಾವತಿ ಸಿಬ್ಬಂದಿಗಳು ಹಾಗೂ ವಿ ಆರ್ ಡಬ್ಲ್ಯೂ ಗಣೇಶ್ ಸಹಕರಿಸಿದರು. ಶ್ರೀಮತಿ ಚಂದ್ರಾವತಿ ಗ್ರಂಥಪಾಲಕಿ ಧನ್ಯವಾದವಿತ್ತರು.

Related posts

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
error: Content is protected !!