23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ


ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ಯ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತ್ಯಾಗ ಬಲಿದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಸ್ಪರ್ಧೆಗಳನ್ನು ನಡೆಸಲು ನಿರ್ದೇಶಿಸಿದ್ದು, ಆ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ, ನೆಹರು ಚಿಂತನ ಕೇಂದ್ರ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಇವರು ಮೇ8 ರಂದು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯಲ್ಲಿ ಆಯೋಜಿಸಿದ್ದ “

ಭಾರತದ ಸ್ವಾತಂತ್ಯ್ರ ಹೋರಾಟ: ಗಾಂಧೀಜಿಯವರ ಕೊಡುಗೆಗಳು ಮತ್ತು ಜೀವನ ಮೌಲ್ಯ ” ಎಂಬ ವಿಷಯದ ಕುರಿತು ನಡೆಸಿದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಉಜಿರೆ ಬಿ.ಎಡ್. ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಮಲ್ಲಿಕಾರ್ಜುನ ಎಸ್ ಪಾಟೀಲ್, ದರ್ಶನ್ ಪಿ, ನಾಗವೇಣಿ ಜಿ ಎಸ್ ಇವರು ಪ್ರಥಮ ಬಹುಮಾನ ರೂ. 10000 ನಗದು, ಫಲಕ ಮತ್ತು ಪ್ರಮಾಣಪತ್ರವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಕಾರ್ಯದರ್ಶಿಯವರು, ಆಡಳಿತಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.

Related posts

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!