25.9 C
ಪುತ್ತೂರು, ಬೆಳ್ತಂಗಡಿ
May 10, 2025
ಧಾರ್ಮಿಕ

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನಾವೂರು ಇದರ ವತಿಯಿಂದ ಕಳೆದ ಕೆಲವು ದಿನಗಳಿಂದ ಹಿಂದೆ ಪುಹಲ್ಗಾಮ್‌ನಲ್ಲಿ ಭಯೋತ್ಪಾದಕರ ಪೈಚಾಶಿಕ ಕೃತ್ಯಕ್ಕೆ ‘ಆಪರೇಷನ್ ಸಿಂದೂರ್’ ಮೂಲಕ ಪ್ರತ್ಯುತ್ತರ ನೀಡಿ, ದೇಶದ ಗಡಿಯಲ್ಲಿ ಪಾಕ್ತಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವ ಭಾರತೀಯ ಸೈನ್ಯಕ್ಕೆ ಹಾಗೂ ಸೈನಿಕರಿಗೆ ಶಕ್ತಿ ನೀಡಲು ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’ ಹಾಗೂ ವಿಶೇಷ ಪೂಜೆ ಮೇ 10ರಂದು ಜರುಗಿತು.

ಬೆಳಿಗ್ಗೆ 5.15ರಿಂದ 6 ಗಂಟೆಯವರಿಗೆ ನಾವೂರಿನ ವೈದ್ಯರಾದ ಡಾ. ಪ್ರದೀಪ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವಿಷ್ಟು ಸಹಸ್ರನಾಮ ಪಠಣ ನಡೆಯಿತು. ಬಳಿಕ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಗಡಿಯಲ್ಲಿ ಕಾರ್ಯಾರಣೆ ನಡೆಸುತ್ತಿರುವ ಭಾರತ ದೇಶದ ಸೈನ್ಯ ಹಾಗೂ ಸೈನಿಕರಿಗೆ ದೇವರು ಹೆಚ್ಚಿನ ಶಕ್ತಿ ಹಾಗೂ ಮನೋಬಲವನ್ನು ಕರುಣಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್‌ಕುಮಾರ್ ಹಾಗೂ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ, ದೇಶದ ಸೈನಿಕರಿಗೆ ಹಾಗೂ ಸೈನ್ಯಕ್ಕೆ ಶಕ್ತಿ ತುಂಬಲು ನಾವೂರು ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ಪ್ರದೀಪ್ ಕುಮಾರ್ ಮಾತನಾಡಿ, ಸೈನಿಕರಿಗೆ ಶಕ್ತಿ ತುಂಬುವ ಕಾರ್ಯ ದೇಶದಾದ್ಯಂತ ನಡೆಯುತ್ತಿದ್ದು, ನಾವೂರಿನಲ್ಲಿಯೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಮೂಲಕ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ಹರೀಶ್ ಕಾರಿಂಜ, ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಕರುಣಾಕರ್ ಬೋಜಾರ, ಶ್ರೀನಾಥ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಾವೂರು ಹಾಗೂ ನಡ ಗ್ರಾಮದ ಭಕ್ತರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya
error: Content is protected !!