September 6, 2026
ಧಾರ್ಮಿಕ

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನಾವೂರು ಇದರ ವತಿಯಿಂದ ಕಳೆದ ಕೆಲವು ದಿನಗಳಿಂದ ಹಿಂದೆ ಪುಹಲ್ಗಾಮ್‌ನಲ್ಲಿ ಭಯೋತ್ಪಾದಕರ ಪೈಚಾಶಿಕ ಕೃತ್ಯಕ್ಕೆ ‘ಆಪರೇಷನ್ ಸಿಂದೂರ್’ ಮೂಲಕ ಪ್ರತ್ಯುತ್ತರ ನೀಡಿ, ದೇಶದ ಗಡಿಯಲ್ಲಿ ಪಾಕ್ತಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವ ಭಾರತೀಯ ಸೈನ್ಯಕ್ಕೆ ಹಾಗೂ ಸೈನಿಕರಿಗೆ ಶಕ್ತಿ ನೀಡಲು ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’ ಹಾಗೂ ವಿಶೇಷ ಪೂಜೆ ಮೇ 10ರಂದು ಜರುಗಿತು.

ಬೆಳಿಗ್ಗೆ 5.15ರಿಂದ 6 ಗಂಟೆಯವರಿಗೆ ನಾವೂರಿನ ವೈದ್ಯರಾದ ಡಾ. ಪ್ರದೀಪ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವಿಷ್ಟು ಸಹಸ್ರನಾಮ ಪಠಣ ನಡೆಯಿತು. ಬಳಿಕ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಗಡಿಯಲ್ಲಿ ಕಾರ್ಯಾರಣೆ ನಡೆಸುತ್ತಿರುವ ಭಾರತ ದೇಶದ ಸೈನ್ಯ ಹಾಗೂ ಸೈನಿಕರಿಗೆ ದೇವರು ಹೆಚ್ಚಿನ ಶಕ್ತಿ ಹಾಗೂ ಮನೋಬಲವನ್ನು ಕರುಣಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್‌ಕುಮಾರ್ ಹಾಗೂ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ, ದೇಶದ ಸೈನಿಕರಿಗೆ ಹಾಗೂ ಸೈನ್ಯಕ್ಕೆ ಶಕ್ತಿ ತುಂಬಲು ನಾವೂರು ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ಪ್ರದೀಪ್ ಕುಮಾರ್ ಮಾತನಾಡಿ, ಸೈನಿಕರಿಗೆ ಶಕ್ತಿ ತುಂಬುವ ಕಾರ್ಯ ದೇಶದಾದ್ಯಂತ ನಡೆಯುತ್ತಿದ್ದು, ನಾವೂರಿನಲ್ಲಿಯೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಮೂಲಕ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ಹರೀಶ್ ಕಾರಿಂಜ, ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಕರುಣಾಕರ್ ಬೋಜಾರ, ಶ್ರೀನಾಥ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಾವೂರು ಹಾಗೂ ನಡ ಗ್ರಾಮದ ಭಕ್ತರು ಉಪಸ್ಥಿತರಿದ್ದರು.

Related posts

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!