September 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya
error: Content is protected !!