23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನಾವೂರು ಇದರ ವತಿಯಿಂದ ಕಳೆದ ಕೆಲವು ದಿನಗಳಿಂದ ಹಿಂದೆ ಪುಹಲ್ಗಾಮ್‌ನಲ್ಲಿ ಭಯೋತ್ಪಾದಕರ ಪೈಚಾಶಿಕ ಕೃತ್ಯಕ್ಕೆ ‘ಆಪರೇಷನ್ ಸಿಂದೂರ್’ ಮೂಲಕ ಪ್ರತ್ಯುತ್ತರ ನೀಡಿ, ದೇಶದ ಗಡಿಯಲ್ಲಿ ಪಾಕ್ತಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವ ಭಾರತೀಯ ಸೈನ್ಯಕ್ಕೆ ಹಾಗೂ ಸೈನಿಕರಿಗೆ ಶಕ್ತಿ ನೀಡಲು ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’ ಹಾಗೂ ವಿಶೇಷ ಪೂಜೆ ಮೇ 10ರಂದು ಜರುಗಿತು.

ಬೆಳಿಗ್ಗೆ 5.15ರಿಂದ 6 ಗಂಟೆಯವರಿಗೆ ನಾವೂರಿನ ವೈದ್ಯರಾದ ಡಾ. ಪ್ರದೀಪ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವಿಷ್ಟು ಸಹಸ್ರನಾಮ ಪಠಣ ನಡೆಯಿತು. ಬಳಿಕ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಗಡಿಯಲ್ಲಿ ಕಾರ್ಯಾರಣೆ ನಡೆಸುತ್ತಿರುವ ಭಾರತ ದೇಶದ ಸೈನ್ಯ ಹಾಗೂ ಸೈನಿಕರಿಗೆ ದೇವರು ಹೆಚ್ಚಿನ ಶಕ್ತಿ ಹಾಗೂ ಮನೋಬಲವನ್ನು ಕರುಣಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್‌ಕುಮಾರ್ ಹಾಗೂ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ, ದೇಶದ ಸೈನಿಕರಿಗೆ ಹಾಗೂ ಸೈನ್ಯಕ್ಕೆ ಶಕ್ತಿ ತುಂಬಲು ನಾವೂರು ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ಪ್ರದೀಪ್ ಕುಮಾರ್ ಮಾತನಾಡಿ, ಸೈನಿಕರಿಗೆ ಶಕ್ತಿ ತುಂಬುವ ಕಾರ್ಯ ದೇಶದಾದ್ಯಂತ ನಡೆಯುತ್ತಿದ್ದು, ನಾವೂರಿನಲ್ಲಿಯೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಮೂಲಕ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ಹರೀಶ್ ಕಾರಿಂಜ, ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಕರುಣಾಕರ್ ಬೋಜಾರ, ಶ್ರೀನಾಥ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಾವೂರು ಹಾಗೂ ನಡ ಗ್ರಾಮದ ಭಕ್ತರು ಉಪಸ್ಥಿತರಿದ್ದರು.

Related posts

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
error: Content is protected !!