September 6, 2026
ಧಾರ್ಮಿಕ

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನಾವೂರು ಇದರ ವತಿಯಿಂದ ಕಳೆದ ಕೆಲವು ದಿನಗಳಿಂದ ಹಿಂದೆ ಪುಹಲ್ಗಾಮ್‌ನಲ್ಲಿ ಭಯೋತ್ಪಾದಕರ ಪೈಚಾಶಿಕ ಕೃತ್ಯಕ್ಕೆ ‘ಆಪರೇಷನ್ ಸಿಂದೂರ್’ ಮೂಲಕ ಪ್ರತ್ಯುತ್ತರ ನೀಡಿ, ದೇಶದ ಗಡಿಯಲ್ಲಿ ಪಾಕ್ತಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವ ಭಾರತೀಯ ಸೈನ್ಯಕ್ಕೆ ಹಾಗೂ ಸೈನಿಕರಿಗೆ ಶಕ್ತಿ ನೀಡಲು ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’ ಹಾಗೂ ವಿಶೇಷ ಪೂಜೆ ಮೇ 10ರಂದು ಜರುಗಿತು.

ಬೆಳಿಗ್ಗೆ 5.15ರಿಂದ 6 ಗಂಟೆಯವರಿಗೆ ನಾವೂರಿನ ವೈದ್ಯರಾದ ಡಾ. ಪ್ರದೀಪ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವಿಷ್ಟು ಸಹಸ್ರನಾಮ ಪಠಣ ನಡೆಯಿತು. ಬಳಿಕ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಗಡಿಯಲ್ಲಿ ಕಾರ್ಯಾರಣೆ ನಡೆಸುತ್ತಿರುವ ಭಾರತ ದೇಶದ ಸೈನ್ಯ ಹಾಗೂ ಸೈನಿಕರಿಗೆ ದೇವರು ಹೆಚ್ಚಿನ ಶಕ್ತಿ ಹಾಗೂ ಮನೋಬಲವನ್ನು ಕರುಣಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ. ಮೋಹನ್‌ಕುಮಾರ್ ಹಾಗೂ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ, ದೇಶದ ಸೈನಿಕರಿಗೆ ಹಾಗೂ ಸೈನ್ಯಕ್ಕೆ ಶಕ್ತಿ ತುಂಬಲು ನಾವೂರು ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ಪ್ರದೀಪ್ ಕುಮಾರ್ ಮಾತನಾಡಿ, ಸೈನಿಕರಿಗೆ ಶಕ್ತಿ ತುಂಬುವ ಕಾರ್ಯ ದೇಶದಾದ್ಯಂತ ನಡೆಯುತ್ತಿದ್ದು, ನಾವೂರಿನಲ್ಲಿಯೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಮೂಲಕ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ಹರೀಶ್ ಕಾರಿಂಜ, ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಕರುಣಾಕರ್ ಬೋಜಾರ, ಶ್ರೀನಾಥ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಾವೂರು ಹಾಗೂ ನಡ ಗ್ರಾಮದ ಭಕ್ತರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya
error: Content is protected !!