25.9 C
ಪುತ್ತೂರು, ಬೆಳ್ತಂಗಡಿ
May 11, 2025
ರಾಷ್ಟ್ರೀಯ ಸುದ್ದಿ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಸಂಘರ್ಷಕ್ಕೆ ಕದನ ವಿರಾಮ ಘೋಷಣೆ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಇದ್ದ ಸಂಘರ್ಷಕ್ಕೆ ಕದನ ವಿರಾಮ ಘೋಷಿಲಾಗಿದೆ. ಈ ಬಗ್ಗೆ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಕದನ ವಿರಾಮದ ಬಗ್ಗೆ ಭಾರತ ಮತ್ತು ಪಾಕ್ ಒಪ್ಪಂದಕ್ಕೆ ಬಂದಿವೆ, ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟ ದೃಢವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವಿಟ್ ಮಾಡಿ ಹೇಳಿದ್ದಾರೆ.

‘. ‘ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ಸಂಧಾನವಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ.” ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕ‌ರ್ ಹೇಳಿದರು.
ಅಂದರೆ ಎರಡೂ ದೇಶಗಳ ಮಧ್ಯೆ ಇದ್ದ ಗುಂಡಿನ ದಾಳಿಗಳು ನಿಲ್ಲುತ್ತವೆ. ಆದರೆ ಉಗ್ರವಾದದ ವಿರುದ್ಧ ಭಾರತದ ಹೋರಾಟ ಮುಂದುವರೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ಜೈಶಂಕರ್ ಹೇಳಿದ್ದಾರೆ. ಇಂದು ಪ್ರಧಾನಿ ನೇತೃತ್ವದಲ್ಲಿ ಅವರ ನಿವಾಸದಲ್ಲಿ ನಡೆದ ಮೂರು ಸೇನೆಗಳ ಮುಖ್ಯಸ್ಥರ ನಡುವಿನ ಮತ್ತು ಉನ್ನತ ಮಟ್ಟದ ಸಭೆಯಲ್ಲಿ ಕೂಡ ಉಗ್ರ ರೀತಿಯಲ್ಲಿ ದಾಳಿ ನಡೆದರೆ ಭಾರತ ಅದನ್ನು ಯುದ್ಧವೆಂದೇ ಪರಿಗಣಿಸಲಿದೆ ಎಂಬ ನೀತಿಯನ್ನು ಹೊಂದಿರಲಿದ್ದೇವೆ ಎಂದು ಹೇಳಿತ್ತು. ಭಾರತದ ಮೇಲೆ ಉಗ್ರ ದಾಳಿಗೆ ತನ್ನ ನೆಲೆಗಳನ್ನು ಪಾಕಿಸ್ತಾನ ನೀಡಿದರೆ. ಭಾರತದ ಉತ್ತರ ಯುದ್ಧವೇ ಆಗಿರಲಿದೆ ಎಂಬುದು ಸ್ಪಷ್ಟ.
ಕದನ ವಿರಾಮಕ್ಕೆ ಮೊದಲು ಮಾತುಕತೆಗೆ ಒಪ್ಪಿಕೊಂಡಿದ್ದು ಪಾಕಿಸ್ತಾನದ್ದೇ ಆಗಿದೆ. ಮಧ್ಯಾಹ್ನ ಭಾರತದ ಡಿಜಿಒಎಂ ಗೆ ಮೊದಲ ಕರೆ ಪಾಕಿಸ್ತಾದಿಂದ ಬಂತು. ಈ ನಡುವೆ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ನಡೆದಿದೆ ಎಂದು ಸಂಜೆ ಘೋಷಿಸಿದ್ದರು. ಹೀಗಾಗಿ ಅಮೆರಿಕದ ಮಧ್ಯಸ್ಥಿಕೆ ಯಾಕೆ ಎಂಬ ಪ್ರಶ್ನೆ ಈಗ ಮೂಡಿದೆ. ಯಾಕೆಂದರೆ ಭಾರತ ನಮ್ಮ ಸಮಸ್ಯೆಯನ್ನು ನಾವೇ ನಿವಾರಿಸಿಕೊಳ್ಳುತ್ತೇವೆ ಎಂದು ಮೊದಲಿನಿಂದಲೂ ಹೇಳಿಕೊಂಡು w໐໖໖.

ಸಂಜೆ 5 ಗಂಟೆಯಿಂದಲೇ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು, ಮೇ.12ರಂದು ಭಾರತದ ಡಿಜಿಒಎಂ ಮತ್ತು ಪಾಕಿಸ್ತಾನದ ಡಿಜಿಒಎಂ ನಡುವೆ ಮಾತುಕತೆ ನಡೆಯಲಿದೆ. ಹೀಗಾಗಿ ಸದ್ಯಕ್ಕಂತೂ ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಮೇ.12ರಂದು ಉಭಯ ದೇಶಗಳ ನಡುವೆ ಯಾವ ರೀತಿಯಲ್ಲಿ ಮಾತುಕತೆ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3:35 ಗಂಟೆಗೆ ಭಾರತೀಯ ಡಿಜಿಎಂಒ ಅವರಿಗೆ ಮಾತುಕತೆಗೆ ಕರೆದರು. ಭಾರತೀಯ ಸಮಯ 5.00 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು.

Related posts

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya
error: Content is protected !!