September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya
error: Content is protected !!