23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya
error: Content is protected !!