September 6, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಬಿಎಮ್ಎಸ್ ನ 70ನೇ ವರ್ಷದ ಕಾಯಕ್ರಮ: ಡಾ.ಮೋಹನ್ ಜೀ ಭಾಗವತ್ ಅವರ ಸಮಾರೋಪ ಭಾಷಣ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಪಿನಾಕೆ ಸಭಾಭವನದಲ್ಲಿ ನೇರಪ್ರಸಾರ ವೀಕ್ಷಣೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!