23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya
error: Content is protected !!