22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೇ 12 ರಿಂದ ಮೇ 16ರವರೆಗೆ ನಡೆಯಲಿರುವ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ -೨೦೨೫ರ ಮಹಾಸಮ್ಮೇಳನ , ಇದರ ಉದ್ಘಾಟನಾ ಸಮಾರಂಭವು ಮೇ 12ರಂದು ನಡೆಯಿತು.

ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾ ಸಮ್ಮೇಳನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿ, ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಆತಿಥಿಗಳಾಗಿ ಬೆಂಗಳೂರು ಎಸ್‌ವಿವೈಎಎಸ್‌ಎ ವಿಶ್ವವಿದ್ಯಾಲಯ ಕುಲಪತಿ ಡಾ. ಹೆಚ್. ಆರ್ ನಾಗೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ನವದೆಹಲಿ ಯೋಗ ಹಾಗೂ ಪ್ರಕೃತಿ ವೈದ್ಯ ಸಂಶೋಧನಾ ಕೇಂದ್ರಾಡಳಿತ ಸಂಸ್ಥೆ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್, ಭಾರತೀಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಪದವೀಧರರ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನವೀನ್ ಕೆ.ವಿ. ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಿ. ಹರ್ಷೇಂದ್ರ ಕುಮಾರ್, ಪ್ರಾಚಾರ್ಯ ಡಾ.ಪ್ರಶಾಂತ ಶೆಟ್ಟಿ, ಬಾಬು ಜೋಸೆಫ್ , ಮಂಜುನಾಥ ಎಂ.ಕೆ , ಡಾ. ಪ್ರಶಾಂತ ಶೆಟ್ಟಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ನಿದೇ೯ಶಕ ಡಿ.ಶ್ರೇಯಸ್ ಕುಮಾರ್ ಭಾಗವಹಿಸಿದ್ದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ.ಸತೀಶ್ಚಂದ್ರ ಎಸ್.ಸ್ವಾಗತಿಸಿದರು. ಡಾ.ಬಿಂದು, ಡಾ.ದೀಪಿಕಾ , ಅನನ್ಯ, ಪ್ರತೀಕ್ಷಾ ಕಾಯ೯ಕ್ರಮ ನಿರೂಪಿಸಿದರು.

Related posts

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya
error: Content is protected !!