September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!