27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya
error: Content is protected !!