July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!