May 13, 2025
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
error: Content is protected !!