July 23, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya
error: Content is protected !!