23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಅನಿಯಮಿತ ವಿದ್ಯುತ್: ವ್ಯಾಪಾರಸ್ಥರಿಗೆ ಸಂಕಷ್ಟ
ವರ್ತಕರ ಸಂಘದಿಂದ ಮೆಸ್ಕಾಂ ಇಲಾಖೆಗೆ ಮನವಿ

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅನಿಯಮಿತವಾಗಿ ವಿದ್ಯುತ್ ಹಲವು ಬಾರಿ ಕಡಿತವಾಗಿರುವುದಿಂದ ನಗರದ ವ್ಯಾಪಾರ ವ್ಯವಹಾರ ಮಾಡುವ ವರ್ತಕರಿಗೆ ಈ ಸಮಸ್ಯೆಯಿಂದ ಬಹಳಷ್ಟು ಕಷ್ಟ ನಷ್ಟಗಳಿಗೆ ಒಳಗಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಮೆಸ್ಕಾಂನ ಎಇ ಹಾಗೂ ಜೆಇ ಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.


ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಿ ಈ ಸಮಸ್ಯೆಗೆ ಮುಕ್ತಿ ನೀಡಬೇಕಾಗಿ ಕೋರಿಕೆ ಮಾಡಲಾಯಿತು. ಜೆಇ ಹಾಗೂ ಎಇ ಯವರು ಇನ್ನು ಮುಂದಕ್ಕೆ ಇಂತಹ ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ಮುಂದಿನ ವಾರ ಮಂಗಳೂರಿನಿಂದ ಅಧಿಕಾರಿಗಳು ಬರುವಾಗ ನಮ್ಮನ್ನು ಆಮಂತ್ರಿಸಿ ಖುದ್ದು ಅವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆ. ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್ ಲೋಬೋ ಕಾರ್ಯದರ್ಶಿ ಲ್ಯಾನ್ಸಿ ಎ. ಪಿರೇರಾ, ನಿಕಟ ಪೂರ್ವ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿನ್ಸೆಂಟ್ ಡಿ. ಸೋಜ, ಶಶಿಧರ್ ಪೈ, ಶೀತಲ್ ಜೈನ್ ಹಾಗೂ ಅಶೋಕ್ ಲಾಯಿಲ ಉಪಸ್ಥಿತರಿದ್ದರು.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!