25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ.

ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.ಕನ್ನಡದ ಜನಪ್ರಿಯ ಕಾರ್ಯಕ್ರಮ ಕಾಮಿಡಿ ಕಿಲಾಡಿ -3 ವಿಜೇತರಾಗಿದ್ದ ಅವರು, ತನ್ನ ವಿಭಿನ್ನ ಅಭಿನಯದಿಂದ ಕರುನಾಡಿನ ಮನಗೆದ್ದಿದ್ದರು.

‘ಕಾಮಿಡಿ ಕಿಲಾಡಿ’ ಶೋನಲ್ಲಿ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು.ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ‘ಚೈತನ್ಯ ಕಲಾವಿದರು’ ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆಗಿದ್ದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.ರಾಕೇಶ್ ಅವರು ಕನ್ನಡ ಮತ್ತು ತುಳುವಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಕೇಶ್ ಕನ್ನಡದಲ್ಲಿ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆ‌ರ್ ಪೊಲೀಸ್’, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್’, ‘ಇಲ್ಲೋಕ್ಕೆಲ್‌’ ಸೇರಿದಂತೆ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಇನ್ನು ಕರಾವಳಿಯ ರಿಯಾಲಿಟಿ ಶೋಗಳಾದ ‘ಬಲೆ ತೇಲಿಪಾಲೆ’, ‘ಮೇ 22’, ‘ಸ್ಟಾರ್’, ‘ತುಯಿನಾಯೆ ಪೋಯೆ’ ಸೇರಿದಂತೆ ಕೆಲ ನಾಟಕಗಳಲ್ಲಿ ಅಭಿನಯಿಸಿದ್ದರು.ಕಿರುತೆರೆಯಲ್ಲಿ ರಾಕೇಶ್ ಅವರು ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ‘ಹಿಟ್ಲರ್ ಕಲ್ಯಾಣ’ ಎನ್ನುವ ಧಾರಾವಾಹಿಯಲ್ಲಿ ಅವರು ನಟಿಸಿದ್ದರು.

Related posts

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya
error: Content is protected !!