September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆಯು ಮೇ 11ರಂದು ನಡೆಯಿತು.

ಈ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರದ ತೀರ್ಥ ಪ್ರಸಾದವನ್ನು ಬೈಕ್ ರ್‍ಯಾಲಿ ಮೂಲಕ ನರಸಿಂಹಗಡ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ತಂತ್ರಿಗಳಾದ ನಂದಕುಮಾರ್ ಕೊಯ್ಯೂರು, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಆರಿಗ ನಡ, ಕರುಣಾಕರ ಗೌಡ ಬೋಜಾರ, ಪುರುಷೋತ್ತಮ ಶೆಣೈ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ನಡ ವಿ.ಹಿಂ.ಪ.ಅಧ್ಯಕ್ಷ ಸುಭಾಶ್ಚಂದ್ರ ಎನ್.ಬಿ., ಗ್ರಾ.ಪಂ. ಸದಸ್ಯ ಹರೀಶ್ಚಂದ್ರ ಎನ್.ಬಿ., ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!