24.8 C
ಪುತ್ತೂರು, ಬೆಳ್ತಂಗಡಿ
May 13, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!